ಬೆಂಗಳೂರುಸುವರ್ಣ ಗಿರಿ ಟೈಮ್ಸ್

”ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ: ಸಚಿವ ಮಧು ಬಂಗಾರಪ್ಪ .

ಬೆಗಳೂರು: ಉಪನ್ಯಾಸಕರಿಗೆ ಕಾಲಮಿತಿ ಬಡ್ತಿ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರೌಢ ಶಾಲೆಯಿಂದ ಬಡ್ತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಕಾರ್ಯನಿರ್ವ ಹಿಸುತ್ತಿರುವವರಿಗೆ 10, 15, 20, 25 ವರ್ಷಗಳ ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ ಚರ್ಚಿಸಿದ್ದಾರೆ.

ಕಾಲ ಮಿತಿ ಬಡ್ತಿ ಸೇರಿ ಉಪನ್ಯಾಸಕರ ಹಲವು ಬೇಡಿಕೆ ಈಡೇರಿ ಸಲು ಸಚಿವರು ಒಪ್ಪಿದ್ದಾರೆ. ಪ್ರೌಢ ಶಾಲೆಯಿಂದ ಪದೋನ್ನತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲಾಗುತ್ತದೆ. 2008 ರ ಆಗಸ್ಟ್ 1 ರಿಂದ ನೇಮಕವಾದ ಉಪನ್ಯಾಸಕರಿಗೆ ಒಂದು ವಿಶೇಷ ವೇತನ ಬಡ್ತಿ ಮಂಜೂರು ಮಾಡಲಿದ್ದು, ಉಳಿದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button