ಬಾಗಲಕೋಟೆಸುವರ್ಣ ಗಿರಿ ಟೈಮ್ಸ್

ಬಾದಾಮಿ: BEO ಕಚೇರಿ ಅಧೀಕ್ಷಕ ವೆಂಕಟೇಶ ಲೋಕಾಯುಕ್ತ ಪೊಲೀಸರು ಅರೆಸ್ಟ್.

ಬಾಗಲಕೋಟೆ: ಜಿಲ್ಲೆಯ ಬಾದಾಮಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ₹ 8 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಅಧೀಕ್ಷಕ ವೆಂಕಟೇಶ ಇನಾಮದಾರ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹುನಗುಂದ ತಾಲ್ಲೂಕಿನ ಚಿತ್ತರಗಿ ಗ್ರಾಮದ ಸತ್ಯಪ್ಪ ಕಾಮಾ ಅವರು ಸ್ಥಗಿತ ವೇತನದ ಬಾಕಿ ಬಿಲ್‌ ಮಂಜೂರು ಮಾಡಿಕೊಡುವಂತೆ ವೆಂಕಟೇಶ ಇನಾಮದಾರಗೆ ಅರ್ಜಿ ಸಲ್ಲಿಸಿದ್ದರು.

ಅದಕ್ಕೆ ₹ 18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅವರು ₹ 10 ಸಾವಿರ ಫೋನ್‌ ಪೇ ಪಡೆದಿದ್ದರು. ನಂತರ ₹ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯಪ್ಪ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಡಿಎಸ್‌ಪಿ ಪುಷ್ಪಲತಾ ಎನ್‌. ಸಿಬ್ಬಂದಿ ಯೊಂದಿಗೆ ಕಾರ್ಯಾಚರಣೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button