ಧಾರವಾಡಸುವರ್ಣ ಗಿರಿ ಟೈಮ್ಸ್

ಹಣ ತೆಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೆ ಎನ್ನುವ ಸುದ್ದಿಗೆ ಬಿಜೆಪಿಯವರೇ ಉತ್ತರ ಕೊಡಬೇಕು: ಮಾಜಿ ಸಿಎಂ ಜಗದೀಶ ಶೆಟ್ಟರ್.

ಹುಬ್ಬಳ್ಳಿ: ಹಣ ತೆಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೆ ಎನ್ನುವ ಸುದ್ದಿಗೆ ಬಿಜೆಪಿಯವರೇ ಉತ್ತರ ಕೊಡಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್‌ ಕೊಡಿಸೋಕೆ ಟೀಮ್‌ ತಯಾರಾಗಿದೆ ಅಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ಕಾರ್ಯಕರ್ತರೇ ಡೀಲ್‌ನಲ್ಲಿ ತೊಡಗಿದ್ದಾರೆ. ಕನಕಗಿರಿಯಲ್ಲೂ ಟಿಕೆಟ್ ಡೀಲ್ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಇಂತಹ ಇನ್ನೂ ಹಲವಾರು ಪ್ರಕರಣಗಳು ಇರಬಹುದು. ಆದರೆ ಕೆಲವರು ಧೈರ್ಯ ಮಾಡದೇ ದೂರು ನೀಡದಿರಬಹುದು. ಹೀಗಾಗಿ ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಬಿಜೆಪಿ ನಾಯಕರು ಇದು ಪಕ್ಷಕ್ಕೆ ಸಂಬಂಧವೇ ಇಲ್ಲ ಎನ್ನುತ್ತಿದ್ದಾರೆ. ಆದರೆ ಎಲ್ಲೋ ಹಣದ ವ್ಯವಹಾರ ನಡೆದಿದೆ ಎಂದಾಗ ಅದು ಬಿಜೆಪಿಗೇ ಬಂದು ನಿಲ್ಲುತ್ತದೆ. ಇದರಿಂದ ಕೆಲವೇ ವ್ಯಕ್ತಿಗಳ ಕೈಯಲ್ಲಿ ಬಿಜೆಪಿ ಇದೆ ಅನ್ನೋದು ಇವಾಗ ಪ್ರೂವ್ ಆಗ್ತಿದೆ ಎಂದು ಕುಟುಕಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button