ವಿಜಯಪುರಸುವರ್ಣ ಗಿರಿ ಟೈಮ್ಸ್

ಬಿ.ಎಸ್.ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಬಸನಗೌಡ ಯತ್ನಾಳ್ ಆಕ್ರೋಶ

ವಿಜಯಪುರ: ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಏನು ಹೇಳುತ್ತಾರೋ ಅದು ಉಲ್ಟಾ ನಡೆದಿರುತ್ತದೆ’ ಅಂತಾ ಟೀಕಿಸಿದ್ದಾರೆ.

ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲವೆಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್​ ಬಳಿ ಎಲ್ಲಾ ಮಾತನಾಡಿಕೊಂಡು ಬಂದಿದ್ದರು. ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ’ವೆಂದು ಹೇಳಿದ್ದಾರೆ.

‘ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button