SSLC ಅಂಕಪಟ್ಟಿ ತಿದ್ದುಪಡಿ ಆರೋಪ 25 ಅಭ್ಯರ್ಥಿಗಳ ವಿರೂದ್ದ ಪ್ರಕರಣ ದಾಖಲು.

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕ (ಡಾಕ್ ಸೇವಕ್) ಹುದ್ದೆ ಗಿಟ್ಟಿಸಿಕೊಳ್ಳಲು ಎಸ್ಸೆಸ್ಸೆಲ್ಸಿಯ ಅಕ್ಕಪಟ್ಟಿ ಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023ರ ಜುಲೈ ತಿಂಗಳಲ್ಲಿ ಡಾಕ್ ಸೇವಕ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಎಸ್ಸೆಸ್ಸೆಲ್ಸಿಯನ್ನು ಗರಿಷ್ಠ ವಿದ್ಯಾರ್ಹತೆ ಯಾಗಿ ನಿಗದಿಪಡಿಸಲಾಗಿತ್ತು. ಸಲ್ಲಿಕೆಯಾದ ಅಭ್ಯರ್ಥಿಗಳ ಅಂಕಪಟ್ಟಿಯ ನೈಜತೆ ಪರಿಶೀಲನೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗೀಯ ಕಚೇರಿ ಕಳುಹಿಸಿದಾಗ 25 ಅಭ್ಯರ್ಥಿಗಳ ಅಂಕಪಟ್ಟಿ ನಕಲಿ ಎಂಬುದು ದೃಢಪಟ್ಟಿದೆ.
ನಕಲಿ ಪ್ರಮಾಣ ಪತ್ರ ಸಲ್ಲಿಸಿ ಅಂಚೆ ಇಲಾಖೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ ಆರೋಪದಡಿ ಕಲಬುರಗಿ ಜಿಲ್ಲೆಯ ಸಲೀಂ ಘನಿಸಾಬ್, ಪವಿತ್ರಾ ಮಹಾಂತಪ್ಪ, ಅಶೋಕ ಬಸವಂತರಾಯ, ಮಹೇಂದ್ರಕುಮಾರ ಮೋಹನ, ಈರಮ್ಮ ಈರಣ್ಣ, ಟಬು ಬೇಗಂ, ಶಿವಕುಮಾರ ಸೂರ್ಯಕಾಂತ, ರಾಘವೇಂದ್ರ ಶ್ರೀಮಂತ, ಕಮಲ್ ದಾಸ್, ನಾಮದೇವ್ ಸೋಮು, ಶ್ವೇತಾ ಜಗನ್ನಾಥ, ಗೋಪಿಕೃಷ್ಣಭೀಮಪ್ಪ, ಪಲ್ಲವಿ ಜಟ್ಟೆಪ್ಪ, ವೀರೇಶ ದುಗ್ಗಣ್ಣ, ರಾಹುಲ್ ಹಿರೂರ್ ನಾಯಕ್, ಸಂಗಮೇಶ ನಾಮು ಚನ್ನಯ್ಯ ಸ್ವಾಮಿ, ಸುಭಾಷ, ರಾಹುಲ್ ಶಿವಪುತ್ರಪ್ಪ, ಅಶ್ವಿನಿ ಈರಣ್ಣ, ರೇಣುಕಾ ಅಣ್ಣರಾವ್ ಮತ್ತು ಅನಿಲಕುಮಾರ್, ಬೀದರ್ ಜಿಲ್ಲೆಯ ಮಲ್ಲಿಕಾರ್ಜುನ, ವೀರಭದ್ರಪ್ಪ, ಅಮರಲಿಂಗ ತೋಟೇಶ್ವರಿ ಚಂದ್ರಕಾಂತ ಮನೋಹರ ಹಾಗೂ ವಿಜಯಪುರದ ಗಂಗಮ್ಮ ಕಾಂತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.