ರಾಮನಗರಸುವರ್ಣ ಗಿರಿ ಟೈಮ್ಸ್

ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿ ಆತ್ಮಹತ್ಯೆಗೆ ಶರಣಾದ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ.

ರಾಮನಗರ: ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿ ಹಿರಿಯ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಮೂಲತಃ ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ನಿವಾಸಿಯಾಗಿರುವ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಆತ್ಮಹತ್ಯೆಗೆ ಶರಣಾಗಿರುವ ಹಿರಿಯ ಪರಿಸರವಾದಿ ಭಾನುವಾರ ತಡ ರಾತ್ರಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಚನ್ನಪಟ್ಟಣ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿ ರೂಮ್ ಮಾಡಿಕೊಂಡಿದ್ದ ಪುಟ್ಟಸ್ವಾಮಿ ಅವರು ತನ್ನ ರೂಮ್ ನಲ್ಲೆ ನೇಣಿಗೆ ಶರಣಾಗಿದ್ದಾರೆ.

ತನ್ನ ಸ್ವಂತ ಹಣದಲ್ಲಿ ಹಲವಾರು ವನ ನಿರ್ಮಾಣ ಮಾಡಿದ್ದ ಪುಟ್ಟಸ್ವಾಮಿ ಸಾವಿರಾರು ಗಿಡ – ಮರಗಳನ್ನ ಬೆಳೆಸಿದ ಕೀರ್ತಿ ಇವರಿಗಿದೆ.

Related Articles

Leave a Reply

Your email address will not be published. Required fields are marked *

Back to top button