ಚಿಕ್ಕಮಗಳೂರುಸುವರ್ಣ ಗಿರಿ ಟೈಮ್ಸ್

ಸರ್ಕಾರಿ ಭೂಮಿ ಕಬಳಿಕೆ ಆರೋಪ: ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.

ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪ ದಲ್ಲಿ ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿ ರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋ ಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ ಮೂರು ಅಧಿಕಾರಿಗಳ ವಿರೂದ್ದ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಡೂರು ತಾಲೂಕು ಕಚೇರಿಯ ಹಿಂದಿನ ತಹಶೀಲ್ದಾರ್ ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡ ಯ್ಯ, ಆರ್ ಐ ಕಿರಣ್ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಉಮೇಶ್ ಕಾರವಾರದ ಸೀಬರ್ಡ್ ನೌಕಾನೆಲೆ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದಾರೆ. ಕಡೂರಿನ ಉಳ್ಳಿನಾಗರ ಗ್ರಾಮದಲ್ಲಿ 5.4 ಎಕರೆ ಸರ್ಕಾರಿ ಭೂಮಿ ಕಬಳಿಕೆಗಾಗಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಂಜೂರು ಮಾಡಿದ್ದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ಮೇರೆಗೆ ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜು ಮೂವರ ವಿರುದ್ಧ ದೂರು ನೀಡಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಮೂವರು ಅಧಿಕಾರಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button